ಶಂಕರ್ ನಾಗ್ ಜನ್ಮದಿನದಂದು ಉಪೇಂದ್ರ ಅವರು ಅವರ ಬಯೋಪಿಕ್ ಕುರಿತು ಮಾತನಾಡಿದ್ದಾರೆ. ಬಯೋಪಿಕ್ ನಿರ್ಮಾಣವು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ.ಅನಂತ್ ನಾಗ್ ಮತ್ತು ಗಾಯತ್ರಿ ಅವರ ಒಪ್ಪಿಗೆ, ಸ್ಕ್ರಿಪ್ಟ್ ತಯಾರಿ ಹಾಗೂ ವಾಣಿಜ್ಯಕ ಅಂಶಗಳ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.
ಶಂಕರ್ ನಾಗ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ, ನಿರ್ಮಾಪಕ ಹಾಗೂ ನಿರ್ದೇಶಕ. ಅಪಘಾತದಲ್ಲಿ ಅವರು ನಿಧನ ಹೊಂದದೆ ಇದ್ದಿದ್ದರೆ ಕನ್ನಡ ಚಿತ್ರಂಗಕ್ಕೆ ಅದೆಷ್ಟು ಅದ್ಭುತ ಸಿನಿಮಾಗಳು ಸಿಗುತ್ತಿದ್ದವೋ. ಆದರೆ, ವಿಧಿ ಅದಕ್ಕೆ ಅವಕಾಶ ಕೊಡಲೇ ಇಲ್ಲ. ಸಣ್ಣ ವಯಸ್ಸಿನಲ್ಲೇ ಸಾಕಷ್ಟು ಸಾಧನೆ ಮಾಡಿ, ತರಾತುರಿಯಲ್ಲೇ ಅವರು ಹೋಗಿಬಿಟ್ಟರು. ಶಂಕರ್ ನಾಗ್ ಅವರ ಬಯೋಪಿಕ್ ಬಗ್ಗೆ ಉಪೇಂದ್ರ (Upendra) ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿದೆ.
ಬಯೋಪಿಕ್ ಮಾಡೋದು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ. ಸಾಮಾನ್ಯ ಸಿನಿಮಾಗಳಲ್ಲಿ ಕಥೆಯನ್ನು ನಿರ್ದೇಶಕರು ಮನಸ್ಸಿಗೆ ತೋಚಿದಂತೆ ಮಾಡಬಹುದು. ಈ ಬಗ್ಗೆ ಯಾರೂ ಪ್ರಶ್ನೆ ಮಾಡುವುದಿಲ್ಲ. ಆದರೆ, ಬಯೋಪಿಕ್ ವಿಚಾರದಲ್ಲಿ ಆ ರೀತಿ ಆಗುವುದಿಲ್ಲ. ಏನು ಇದೇ ಅದನ್ನೇ ತೋರಿಸಬೇಕಾಗುತ್ತದೆ. ಈ ಚಾಲೆಂಜ್ನ ಸ್ವೀಕರಿಸಲು ಉಪೇಂದ್ರ ಸಿದ್ಧರಿದಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ ವಿಡಿಯೋ ಗಮನ ಸೆಳೆದಿದೆ.

